Categories: Art-Culturemyworld

ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ

ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ

ಕರ್ನಾಟಕ ಸಂಗೀತ ಲೋಕದ ಮಹಾನ್ ಕಲಾವಿದೆ, ಪದ್ಮವಿಭೂಷಣ ಡಿ.ಕೆ.ಪಟ್ಟಮ್ಮಾಳ್ (90) ಗುರುವಾರ ಚೆನ್ನೈಯ ಕೊಟ್ಟೂರುಪುರಂನ ತಮ್ಮ ನಿವಾಸದಲ್ಲಿ ನಿಧನರಾದರು.

1919ರ ಮಾರ್ಚ್ 28ರಂದು ಕಾಂಚಿಪುರದ ಸಂಪ್ರದಾಯವಾದಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ಪಟ್ಟಮ್ಮಾಳ್, ಕರ್ನಾಟಕ ಸಂಗೀತ ಲೋಕಕ್ಕೆ ಅಧಿಕಾರಯುತವಾಗಿ ಕಾಲಿರಿಸಿದ ಮೊದಲ ಮಹಿಳೆ ಎಂದು ಕರ್ನಾಟಕ ಸಂಗೀತದ ಮೇರು ಕಲಾವಿದ, ದಿವಂಗತ ಸೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕರೆಸಿಕೊಂಡಿದ್ದರು.

ಕರ್ನಾಟಕ ಸಂಗೀತದ ತ್ರಿವಳಿ ಸ್ತ್ರೀರತ್ನಗಳಲ್ಲಿ ಎಂ.ಎಸ್.ಸುಬ್ಬುಲಕ್ಷ್ಮಿ, ಎಂ.ಎಲ್.ವಸಂತಕುಮಾರಿಯವರೊಂದಿಗೆ ಸೇರಿಕೊಂಡಿದ್ದ ಪಟ್ಟಮ್ಮಾಳ್ ಅವರ ಮೂಲ ಹೆಸರು ಅಲಮೇಲು. 65 ವರ್ಷಗಳ ಕಾಲ ಕರ್ನಾಟಕ ಸಂಗೀತದಲ್ಲಿ ತಮ್ಮ ಛಾಪು ಮೂಡಿಸಿದ ಪಟ್ಟಮ್ಮಾಳ್, 10 ಹರೆಯದಲ್ಲೇ ಮೊದಲ ಬಾರಿಗೆ ರೇಡಿಯೋದಲ್ಲಿ (ಅಂದಿನ ಮದ್ರಾಸ್ ಕಾರ್ಪೊರೇಶನ್ ರೇಡಿಯೋ, ಈಗ ಆಲ್ ಇಂಡಿಯಾ ರೇಡಿಯೋ) ಕಛೇರಿ ನೀಡಿದ್ದರು. ಮೂರು ವರ್ಷದ ಬಳಿಕ ಅಂದರೆ 1932ರಲ್ಲಿ ಅವರು ಮದ್ರಾಸ್ ರಸಿಕ ರಂಜನಿ ಸಭಾದಲ್ಲಿ ಮೊದಲ ಸಾರ್ವಜನಿಕ ಕಛೇರಿ ನೀಡಿದರು.

ಕರ್ನಾಟಕ ಸಂಗೀತದಲ್ಲಿ ಅತ್ಯಂತ ಕ್ಲಿಷ್ಟಕರವಾಗಿದ್ದ “ರಾಗಂ, ತಾನಂ, ಪಲ್ಲವಿ”ಯನ್ನು ಸಂಗೀತ ಕಛೇರಿಗಳಲ್ಲಿ ಬಳಸಿದ ಮೊದಲ ಮಹಿಳಾರತ್ನ ಎಂಬ ಹೆಗ್ಗಳಿಕೆಯೂ ಪಟ್ಟಮ್ಮಾಳ್ ಅವರಿಗಿದೆ. (ವೆಬ್‌ದುನಿಯಾ)

Avinash B

Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

View Comments

  • ಅದೆಲ್ಲ ಓಕೆ. "ಅಂ"ಕಾರ ಯಾಕೆ?
    ರಾಗ-ತಾನ-ಪಲ್ಲವಿ ಎಂದರೆ ಕನ್ನಡಿಸಿದಂತಾಗುತ್ತೆ :)

  • ಆರ್ಬಿಟ್ ಪರ್ಸನ್,
    ಸ್ವಾಗತ. ತಡವಾಗಿ ಉತ್ತರಿಸ್ತಿರೋದಕ್ಕೆ ಮನ್ನಿಸಿ.
    ಸರಿ ನೀವು ಹೇಳಿದ್ದು, ಆದ್ರೆ, ರಾಗಂ, ತಾನಂ, ಪಲ್ಲವಿ ಅಂತ ಹಾಡು ಇದೆಯಲ್ಲ... ಅದನ್ನು ಒಂದಿಷ್ಟು ಬಳಸಿಕೊಂಡೆ ಅಷ್ಟೆ.

Recent Posts

Realme 13 +, Realme 13 5ಜಿ ಫೋನ್ ಬಿಡುಗಡೆ: ವೇಗದ ಫೋನ್‌ನ ವೈಶಿಷ್ಟ್ಯಗಳು, ಬೆಲೆ ಇಲ್ಲಿ ತಿಳಿಯಿರಿ

ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…

1 week ago

e-ಯುಗದ ತನಿಖಾ ಪತ್ರಿಕೋದ್ಯಮ: ಫ್ಯಾಕ್ಟ್ ಚೆಕ್

Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.

1 month ago

ಯಕ್ಷ ಮಂತ್ರ ಮಾಂಗಲ್ಯ: ಕೀರ್ತನಾ ಪ್ರಸಾದ ಕಲ್ಯಾಣವು

ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು

7 months ago

ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ

ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ…

7 months ago

ಒಂದೇ ಫೋನ್‌ನಲ್ಲಿ ಎರಡು WhatsApp ಖಾತೆ ಬಳಸುವುದು ಹೇಗೆ?

ಕಳೆದ ಅಕ್ಟೋಬರ್ 19ರಂದು ಮೆಟಾ ಒಡೆತನದ WhatsApp ಸಂಸ್ಥೆಯೇ ತನ್ನ ಆ್ಯಪ್‌ಗೆ ಹೊಸ ಅಪ್‌ಡೇಟ್ ನೀಡಿದ್ದು, ಎರಡು ವಾಟ್ಸ್ಆ್ಯಪ್ ಖಾತೆಗಳನ್ನು…

9 months ago

AI Images: Text ಬಳಸಿ ಚಿತ್ರ ತಯಾರಿಸುವುದು ಹೇಗೆ?

AI Images: ನಮ್ಮ ಕಲ್ಪನೆಯನ್ನು ಎಐ ಎಂಜಿನ್‌ಗೆ ಟೆಕ್ಸ್ಟ್ (ಪಠ್ಯ) ಮೂಲಕ ಊಡಿಸಿದರೆ ಸಾಕು, ಕ್ಷಣ ಮಾತ್ರದಲ್ಲಿ ನೀವಂದುಕೊಂಡ ಚಿತ್ರವೊಂದು…

9 months ago