Categories: myworldOpinion

‘ವಿರೋಧಿ’ಗಾಗಿ ಪ್ರಣಾಳಿಕೆ ಸಿದ್ಧಪಡಿಸೋಣ!

ಪ್ರತಿ ಬಾರಿಯೂ ಹೊಸ ವರುಷ ಬಂದಾಗ, ಮನದೊಳಗೆ ಹೊಸ ಭಾವ, ಹೊಸ ಆಶಾವಾದ ಚಿಗುರೊಡೆಯುತ್ತದೆ. ಪ್ರಕೃತಿ ದೇವಿಯು ಹೊಸ ಫಲಗಳೊಂದಿಗೆ ಮೈತುಂಬಿಕೊಂಡಂತೆ, ಚೈತ್ರದ ಆಗಮನಕ್ಕೆ ಪ್ರಕೃತಿ ಮಾತೆ ಪುಳಕಗೊಂಡಂತೆ.

ಮತ್ತೆ ಬಂದಿದೆ ನವ ಯುಗ. ಪ್ರತೀ ಹೊಸ ಯುಗದ ಆದಿಯಲ್ಲಿ ನಾವು ಹೇಳೋದು “ಕಳೆದ ವರ್ಷ ತೀರಾ ಚಿಂತಾಜನಕವಾಗಿತ್ತು. ಸಿಹಿಗಿಂತ ಕಹಿಯೇ ಹೆಚ್ಚಿತ್ತು”!. ಈ ಬಾರಿಯೂ ಹೇಳುವುದು ಅದನ್ನೇ. ಬೇಕಿದ್ದರೆ ಒಂದಷ್ಟು ಜೋರಾಗಿಯೇ.

ಯಾಕೆ? ಸರ್ವಧಾರಿ ಸಂವತ್ಸರದತ್ತ ಕಣ್ಣು ಹಾಯಿಸಲು ಭಯಾತಂಕ. ಉಗ್ರರ ದಾಳಿಗಳು, ಹಿಂಸೆ, ಸಾವು ನೋವಿನ ಜೊತೆಗೆ ಈ ಬಾರಿ ಬಂದೆರಗಿತಲ್ಲ… ಬುಡಕ್ಕೇ ಕೊಡಲಿಯೇಟು! ಅದೇ ಆರ್ಥಿಕ ಹಿಂಜರಿತವೆಂಬ ಮಹಾಮಾರಿ. ಅದೆಷ್ಟು ಮಂದಿ ಉದ್ಯೋಗ ಕಳೆದುಕೊಂಡರು, ಅದೆಷ್ಟು ಮಂದಿಯ ವೇತನ ಕಡಿತವಾಯಿತು, ಅದೆಷ್ಟು ನಷ್ಟವಾಯಿತು! ಛೆ, ಛೆ… ಇದ್ದದ್ದೇ ಇದೆಲ್ಲಾ…ಮರೆತು ಬಿಡೋಣ ಅವನ್ನು…

ಪರಸ್ಪರ ಸಂಘರ್ಷಮಯ, ತದ್ವಿರುದ್ಧ ಗುಣಗಳ ಪ್ರತೀಕವಾಗಿರುವ ಬೇವು ಮತ್ತು ಬೆಲ್ಲದ ಬಗ್ಗೆ ಒಂದು ಮಾತು. ಬೇವನ್ನು ನೋವು ಎಂದೂ ಬೆಲ್ಲವನ್ನು ಗೆಲುವೆಂದೂ ನಿಜಜೀವನದಲ್ಲಿ ಪರಿಗಣಿಸಿ ನೋಡಿದರೆ, ಬೆಲ್ಲದ ಪಕ್ಕದಲ್ಲಿ ಬೇವು ಇದ್ದಾಗ ಮಾತ್ರವಷ್ಟೇ ಬಲ್ಲವನೇ ಬಲ್ಲ ಬೆಲ್ಲದಾ ರುಚಿಯ! ಹಂದಿಯಿದ್ದರಷ್ಟೇ ಕೇರಿ ಎನಿತು ಶುದ್ಧಿಯೋ ಹಾಗೆ, ಶುದ್ಧಾಚಾರಕ್ಕೆ ಮಹತ್ವ ಬರುವುದು ಅಲ್ಲೇ ಎಂದು ದಾಸರು ಹೇಳಿದ್ದೂ ಇದೇ ಕಾರಣಕ್ಕೆ. ಯುಗಾದಿಯ ಬೇವು-ಬೆಲ್ಲ, ವಿರಸ-ಸರಸದ ಪ್ರತೀಕವೂ ಹೌದು. ಅದಕ್ಕಲ್ಲವೇ ಸರಸ ಜನನ, ವಿರಸ ಮರಣ, ಸಮರಸವೇ ಜೀವನ ಎಂದಿದ್ದು ತಿಳಿದವರು!

ಯುಗದ ಆದಿಯ ದಿನ ಕೆಟ್ಟ ಘಳಿಗೆಗಳನ್ನೆಲ್ಲಾ ಬೇವು ಎಂಬಂತೆ ಮರೆತು ವಿರೋಧಿಯನ್ನು ಸ್ವಾಗತಿಸಲು ಸಿದ್ಧರಾಗೋಣ. ವಾಸ್ತವಿಕ ಪ್ರಪಂಚದಲ್ಲಿಯೂ ನಿಜ ವೈರಿಗಳನ್ನು ಪ್ರೀತಿಯಿಂದಲೇ ಗೆಲ್ಲಬಹುದಲ್ಲವೇ? ಸ್ವಾಗತಿಸೋಣವಂತೆ. ಆ ಒಂದು ಅನರ್ಘ್ಯ ನಿಯಮವನ್ನು ಅನುಸರಿಸಲು ಸಿದ್ಧರಾಗಬೇಕಿದೆ ಜನ. ಹೊಸ ವರ್ಷ, ಹೊಸ ಹರ್ಷ, ಹೊಸ ಆಶಾವಾದ, ನವ ಭರವಸೆಗಳ ಒಸಗೆ, ಸರ್ವರ ಜೀವನದಲ್ಲಿಯೂ ಚಿಗುರೊಡೆಯಬೇಕು. ಆಶಾವಾದವೇ ಮನುಷ್ಯನ ಜೀವನೋತ್ಸಾಹಕ್ಕೆ, ಬೆಟ್ಟದಷ್ಟು ಕನವರಿಕೆಗಳಿಗೆ ಮೂಲ ಪ್ರೇರಣೆಯಾಗುತ್ತದೆ. ಹೀಗಿರಲು, ಯುಗಾದಿ ಹಬ್ಬದಂದು ನೋವ ಮರೆತು ನಲಿವಿಗಾಗಿ ಕಾತರಿಸೋಣ. ಈ ಮೂಲಕ ತುಕ್ಕು ಹಿಡಿದಂತಿರುವ ಮನಸ್ಸಿಗೆ ಒರೆ ಹಚ್ಚಿ ಶುಭ್ರಗೊಳಿಸಿ, ಹೊಸ ಸಂವತ್ಸರಕ್ಕೆ ಸಿದ್ಧಗೊಳಿಸೋಣ.

ಬೇವು ಬೆಲ್ಲವು ಬೇಕು ಸುಖದ ಬಾಳುವೆಗೆ, ಬಾಳುವೆಯಾ ಆ ಸುಖಕೆ. ಅನಿವಾರ್ಯವೆನಿಸೋ ಕಹಿಯೊಡಗೂಡಿ ಬಾಳಲು ಕಲಿತು, ಸಿಹಿಯ ಬಾಳುವೆಗಾಗಿ ಹಂಬಲಿಸೋಣ. ಎಲ್ಲಕ್ಕೂ ಮಿಗಿಲಾಗಿ, ನವ ನವೋನ್ಮೇಷಕ್ಕಾಗಿ ಕಾತರಿಸುತ್ತಾ, ಹೊಸ ವರುಷದಲ್ಲಿ ಏನೆಲ್ಲಾ ಮಾಡಬಹುದೆಂಬುದರ ಪ್ರಣಾಳಿಕೆ ಸಿದ್ಧಪಡಿಸಿ, ‘ವಿರೋಧಿ’ಯನ್ನು ಎದುರುಗೊಳ್ಳೋಣ…

ವಿರೋಧಿ ಸಂವತ್ಸರವು ವಿರೋಧಿಗಳ ಮನ ಗೆಲ್ಲುವಲ್ಲಿ ಪೂರಕವಾಗಿರಲಿ, ಸಂಭ್ರಮ ಪಡುವ ಹೊಸ ಅವಕಾಶಗಳನ್ನು ಹೆಚ್ಚಿಸಲಿ. ಸಂತಸವುಳ್ಳ ಪ್ರತಿ ದಿನವೂ ಹೊಸ ಯುಗವಾಗಲಿ, ಆದರೆ ಬೇಸರವಿರುವ ಪ್ರತಿ ದಿನ ಮಾತ್ರ ಯುಗವಾಗಿ ಭಾಸವಾಗದಿರಲಿ..!

ಕೊರಡು ಕೊನರಲಿ, ಬರಡು ಹಯನು ಆಗಲಿ… ಸರ್ವರಿಗೂ ಒಳಿತಾಗಲಿ…

Avinash B

Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

View Comments

  • ನಮಸ್ತೆ,

    ಕನ್ನಡದ ಎಲ್ಲ ಯುವ ಕವಿಗಳನ್ನು ಒಂದು ಗೂಡಿಸಲು ವೇದಿಕೆಯಾಗಿ ಯುವ ಕವಿ ಯನ್ನು ಪ್ರಾರಂಭಿಸುತ್ತಿದ್ದೇವೆ. ಕನ್ನಡದ ಎಲ್ಲ ಕವಿಗಳು ಮತ್ತು ಕಾವ್ಯ ಪ್ರೇಮಿಗಳು ಜೊತೆಸೇರಿ ಕಾವ್ಯವನ್ನು ಓದೋಣ, ಕಾವ್ಯವನ್ನು ಚರ್ಚಿಸೋಣ. ನಮ್ಮೊಡನೆ ಸೇರಿ..
    http://yuvakavi.ning.com/

Recent Posts

iPhone 16e: Best Features and Specs: ಹೊಸ ಐಫೋನ್ 16ಇ ಬಿಡುಗಡೆ

iPhone 16e joins the iPhone 16 lineup, featuring the fast performance of the A18 chip,…

4 days ago

ಚಳಿಯಲ್ಲಿ ಬಣ್ಣ ಬದಲಾಯಿಸುವ Realme 14 Pro ಸರಣಿ ಫೋನ್ ಬಿಡುಗಡೆ

ರಿಯಲ್‌ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ…

1 month ago

ಎಐ ವೈಶಿಷ್ಟ್ಯಗಳ realme GT 7 Pro ಬಿಡುಗಡೆ: ಬೆಲೆ ಎಷ್ಟು? ವೈಶಿಷ್ಟ್ಯಗಳೇನು? ಇಲ್ಲಿದೆ ಪೂರ್ಣ ಮಾಹಿತಿ

ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್‌ ಇರುವ ಬಹುನಿರೀಕ್ಷಿತ…

3 months ago

ರಿಯಲ್‌ಮಿ ನಾರ್ಜೋ 70 ಟರ್ಬೊ 5 ಜಿ, ರಿಯಲ್‌ಮಿ ಬಡ್ಸ್ ಎನ್‌1 ಬಿಡುಗಡೆ: ಬೆಲೆ, ವೈಶಿಷ್ಟ್ಯ ತಿಳಿಯಿರಿ

ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1…

5 months ago

ಓದುವಿಕೆ, ಕಲಿಕೆ ಉತ್ತೇಜನಕ್ಕೆ ‘ರೀಡ್-ಅ-ಥಾನ್’: ದಾಖಲೆಯ ಗುರಿ

ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.

5 months ago

Realme 13 +, Realme 13 5ಜಿ ಫೋನ್ ಬಿಡುಗಡೆ: ವೇಗದ ಫೋನ್‌ನ ವೈಶಿಷ್ಟ್ಯಗಳು, ಬೆಲೆ ಇಲ್ಲಿ ತಿಳಿಯಿರಿ

ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…

6 months ago