Categories: myworldOpinion

ಅಪರಿಚಿತರಾಗಿ ಬಂದು ಆತ್ಮೀಯವಾಗುವವರು !

ಮನಸ್ಸಿಗೆ ತೀರಾ ಬೇಸರವಾದಾಗೆಲ್ಲಾ ನಾವೇನು ಮಾಡಬಹುದು? ಇದು ತೀರಾ ಇತ್ತೀಚೆಗೆ ನನ್ನನ್ನು ಕಾಡಿದ ಪ್ರಶ್ನೆ.

ಹಿಂದೆಲ್ಲಾ ಕಾಲೇಜು ಜೀವನದಲ್ಲಾದರೆ ಆತ್ಮೀಯ ಗೆಳೆಯರು, ಗೆಳತಿಯರು ಎಲ್ಲಾ ಇರುತ್ತಿದ್ದರು. ಅವರ ಭುಜಕ್ಕೊರಗಿ, ಅವರ ಆತ್ಮೀಯತೆ ತುಂಬಿದ ಕೈಯಿಂದ ನೇವರಿಸಿಕೊಂಡು ನೋವು ಮರೆಯಬಹುದಾಗಿತ್ತು. ಆದರೆ ಅಂತದ್ದೊಂದು ಭಾಗ್ಯ ನನ್ನದಾಗಿರಲಿಲ್ಲ ಅನ್ನುವ ಕೊರಗು ಇಂದಿಗೂ ನನ್ನನ್ನು ಕಾಡುತ್ತಿದೆ. ಅದು ಬೇರೆ ಸಂಗತಿ. ಅದರ ಬಗ್ಗೆ ಮುಂದೊಮ್ಮೆ ಅನಾವರಣಗೊಳಿಸುವೆ. ಮನಸ್ಸು ಹಗುರವಾಗಬಹುದು.

ಹೌದಲ್ವಾ… ಕಾಲೇಜು ಜೀವನದಲ್ಲಿ ಸಹಪಾಠಿಗಳಾಗಿದ್ದವರ ನೆನಪು ನನಗಿದ್ದರೂ ಅವರು ಈಗ ಯಾರೂ ಜತೆಗಿಲ್ಲ, ಅಂಥದ್ದೊಂದು ಆತ್ಮೀಯತೆಯ ಬಂಧ ಏರ್ಪಡಲಿಲ್ಲವೇಕೆ ಎನ್ನುವುದಕ್ಕೆ ಅಂದಿನ ಪರಿಸ್ಥಿತಿಯೂ ಕಾರಣವಿದ್ದಿರಬಹುದು.

ಇದು ನೆನಪಾದಾಗ, ಜೀವನದಲ್ಲಿ ಏನನ್ನೋ ಕಳೆದುಕೊಂಡಿದ್ದೇನೆ ಅಂತ ನನಗೆ ಹಲವಾರು ಬಾರಿ ಅನ್ನಿಸುತ್ತಿರುತ್ತದೆ.

ಈಗಲೂ ಕೂಡ, ನಿಜ ಜೀವನ ಏನೆಂದು ಅರಿಯಲು ಹೊರಟ, ಜೀವನ ವಿದ್ಯೆಯನ್ನು ಆರ್ಜಿಸಲು ಹೊರಟ ನಮ್ಮಂತಹ ಶಾಶ್ವತ ವಿದ್ಯಾರ್ಥಿ ಬೇಸರ ಕಳೆಯುವುದು ಹೇಗೆ?

ಇಂದಿನ ಡೆಡ್‌ಲೈನ್ ವೀರರೇ ತುಂಬಿರುವ ಕಚೇರಿಗಳಲ್ಲಿ ಬಹುಶಃ ಗೆಳೆತನ, ಸ್ನೇಹ, ಕಾಳಜಿ, ವಾತ್ಸಲ್ಯ ಇತ್ಯಾದಿ ಮೌಲ್ಯಗಳು ಕಳೆದುಹೋಗುತ್ತಿವೆ. ಅಂದರೆ ನಮ್ಮ ಮನದಲ್ಲಿ ದುಗುಡ-ದುಮ್ಮಾನವಿದ್ದರೂ ಅದನ್ನು ತೋರ್ಪಡಿಸಿಕೊಳ್ಳುವಂತಿಲ್ಲ. ಅದು ಬಿಡಿ, ಒಂದಿಷ್ಟು ಪ್ರೀತಿಯ ಮಾತುಗಳನ್ನಾಡಲೂ, ವಾತ್ಸಲ್ಯ ತೋರಿಸಲು ಅದೂ ಅಸಾಧ್ಯ. ಇದಕ್ಕೆ ಕಾರಣ? ಯಾರಿಗೂ ಪುರುಸೊತ್ತು ಇಲ್ಲ!

ಇಂಥ ಸಂದರ್ಭದಲ್ಲಿ ನೆರವಿಗೆ ಬರುವವರು ಎಲ್ಲೋ ಇದ್ದುಕೊಂಡು ನಮ್ಮ ಬೆನ್ನು ತಟ್ಟುತ್ತಾ, ನಮ್ಮೊಳಗಿನ ನಮ್ಮನ್ನು ಗುರುತಿಸಲು ಪ್ರಯತ್ನಿಸುತ್ತಾ ನಮ್ಮೊಳಗೆ ಒಬ್ಬರಾಗಲು ಬರುವ ನಿಮ್ಮಂಥ ನೆಟ್ ಮಿತ್ರರು.

ನೀವೆಲ್ಲಾ ನನಗೆ ಅಪರಿಚಿತರು. ಆದರೆ ಒಂದೆರಡು ಸಾಂತ್ವನದ ನುಡಿಗಳಿಂದ, ಪ್ರೋತ್ಸಾಹದ ಮಾತುಗಳಿಂದ ಆತ್ಮೀಯರಾಗಿಬಿಡುತ್ತೀರಿ. ಮಾನವ ಸಂಬಂಧಗಳು ಇನ್ನೂ ಜೀವಂತವಾಗಿದೆ, ಇಲ್ಲಿ ಭಾವನೆಗಳಿಗೂ ಜಾಗವಿದೆ ಅಂತೆಲ್ಲಾ ನೆನಪಿಸುತ್ತೀರಿ.

ಹಾಗಿದ್ದರೆ ಮಾನವೀಯ ಸಂಬಂಧ ಅನ್ನುವುದು ಇಷ್ಟು ಸುಲಭದಲ್ಲಿ ಏರ್ಪಡಬಹುದೇ? ನಮ್ಮ ಮಧ್ಯೆ ಇರುವವರೇ ನಮ್ಮನ್ನು ಅರ್ಥ ಮಾಡಿಕೊಳ್ಳದಿರುವಾಗ, ಎಲ್ಲೋ ಇರುವವರು ಬರೇ ನೆಟ್-ಸಂಬಂಧದಿಂದ ನಮ್ಮನ್ನು ಪೂರ್ಣವಾಗಿ ಆಕ್ರಮಿಸಿಕೊಂಡುಬಿಡುತ್ತಾರೇಕೆ?

ನಿಮ್ಮ ಆತ್ಮೀಯ ನುಡಿಗಳು ನನ್ನನ್ನು ದಿನದ ಇಪ್ಪತ್ತನಾಲ್ಕು ಗಂಟೆಯಲ್ಲಿ ಕನಿಷ್ಠ ಗಂಟೆಗೊಂದು ಬಾರಿ ಛಕ್ಕಂತ ಸುಳಿದುಹೋಗುತ್ತದೆ.

ಒಂದು ಬಾರಿಯೂ ನೋಡದಿದ್ದರೂ, ದೂರದಿಂದಲೇ ಬೆನ್ನು ತಟ್ಟುತ್ತೀರಿ, ಬರೆಯಲು ಪ್ರೋತ್ಸಾಹಿಸುತ್ತೀರಿ, ಪ್ರೀತಿ ಕೊಡುತ್ತೀರಿ, ಒಂದು ದಿನ ನಾನು ಕಚೇರಿಗೆ ಬಾರದಿದ್ದರೆ ನಮ್ಮ ಬಾಸ್ ಕೂಡ ಕೇಳಲಾರರು, ಆದರೆ ನೀವು ವಿಚಾರಿಸುತ್ತೀರಿ. ಏನಾಯಿತು ಅಂತ ಆತ್ಮೀಯತೆಯಿಂದ ಬ್ಲಾಗಿನಲ್ಲೇ ಕೇಳುತ್ತೀರಿ.

ಕಚೇರಿಗೆ ರಜೆ ಹಾಕಿ ಒಂದು ವಾರ ಊರಿಗೆ ಹೋಗಬೇಕಾದಾಗ, ಊರಿಂದ ಬಂದು ಜ್ವರದಲ್ಲಿ ಮಲಗಿದಾಗ, ಬ್ಲಾಗು ತುಂಬಾ “ಏನಾಯಿತು, ಎಲ್ಲಿ ಹೋದ್ರಿ” ಇತ್ಯಾದಿ ವಿಚಾರಣೆಗಳ ಸುರಿಮಳೆ. ಇದೆಲ್ಲಾ ನೆನಪಿಸಿಕೊಂಡಾಗ ಮನಸ್ಸು ಒದ್ದೆಯಾಗುತ್ತದೆ, ಹೃದಯ ತುಂಬಿ ಬರುತ್ತದೆ.

ನನ್ನ ಬ್ಲಾಗಿನ ಹಿಂದಿನ ಪುಟಗಳನ್ನು ತಿರುವಿ ಹಾಕಿದಾಗ ಈ ವಿಷಯ ಹೊಳೆಯಿತು. ಮನದುಂಬಿ ಬಂತು. ಜೀವನ ಸಾರ್ಥಕ ಅನ್ನೋ ಭಾವನೆ ಬರುತ್ತಿದೆ. ಬಹುಶಃ ಜೀವನದಲ್ಲಿ ಆವತ್ತು ಕಳೆದುಕೊಂಡಿದ್ದನ್ನು ನಾನು ಪಡೆಯುತ್ತಿದ್ದೇನೋ ಅನ್ನಿಸುತ್ತಿದೆ.

ಓ ಆತ್ಮೀಯ ಮಿತ್ರರೇ, ನಿಮ್ಮ ಬಗ್ಗೆ ಕುತೂಹಲ ಹೆಚ್ಚುತ್ತದೆ, ನಿರೀಕ್ಷೆಗಳು ಹೆಚ್ಚುತ್ತವೆ. ಆ ನಿರೀಕ್ಷೆಯೇ ಬದುಕಿನ ರಥವನ್ನು ಮುಂದಕ್ಕೊಯ್ಯುತ್ತದೆ. ಎಲ್ಲದಕ್ಕೂ ಪ್ರೇರಣೆಯಾಗುತ್ತದೆ. ನೀವು ನನ್ನ ಜೀವನದಲ್ಲಿ ಆನಂದದ ರಸಾನುಭೂತಿ ಸುರಿಯುತ್ತಿದ್ದೀರಿ.

ಆದುದರಿಂದ…

ಅಪರಿಚಿತರಾಗಿ ಬಂದು, ಆತ್ಮೀಯವಾಗುತ್ತಾ, ಮನಸ್ಸನ್ನು ಆವರಿಸಿಕೊಂಡಿರುವ,
ಮನಸ್ಸಿಗೆ ಬೇಸರವಾದಲ್ಲಿ ಬೇಗುದಿ ಕಳೆಯುವ ಒಂದಿಷ್ಟು ಹಿತನುಡಿಗಳನ್ನು ಟೈಪಿಸಿ ಹೋಗುವ,

ಪ್ರತಿದಿನವೂ ಹೊಸತನ ಮೂಡಿಸಲು ಕಾರಣವಾಗುವ,

ಹೊಸ ನಿರೀಕ್ಷೆಗಳನ್ನು ಮೂಡಿಸಿ ಮನಸ್ಸಿಗೆ ಹತ್ತಿರವಾಗುವ, ಮನೋಲ್ಲಾಸಕ್ಕೆ ಕಾರಣವಾಗುವ

ಓ ಬ್ಲಾಗ್ ಮಿತ್ರರೇ

ಕೀಬೋರ್ಡ್ ಕೀಲಿಗಳೊಂದಿಗೆ ಆಟವಾಡುತ್ತಾ ನೀವು ನೀಡುತ್ತಿರುವ ನಿರಂತರ ಪ್ರೋತ್ಸಾಹದ ನುಡಿಗಳಿಗೆ ಸಾವಿರ ವಂದನೆ.

-ಅವಿನಾಶ್ 🙂

Avinash B

Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

View Comments

  • ನಿಮಗೆ ಹೇಗೆ ಅನುಭವ ಆಗುತ್ತಿದೆಯೋ ಅದೇ ಅನುಭವ ನನಗೂ ಆಗುತ್ತಿದೆ. ಇತರರಿಗೂ ಆಗುತ್ತಿರಬಹುದು. ನಾವೆಲ್ಲರೂ ಜೀವನದಲ್ಲಿ ಒಂದೇ ತೆರನಾದ ನೌಕೆಯಲ್ಲಿ ತೇಲುತ್ತಿರುವುದಲ್ಲವೇ? ಹೀಗೆಯೇ ಒಬ್ಬರಿಗೊಬ್ಬರು ಬೆನ್ನು ತಟ್ಟಿಕೊಂಡೇ ಸಾಗುವ. ಆದರೆ ಹಾಗಾಗುವುದಿಲ್ಲ, ಮೇಲೇ ನೀವೇ ಉಕ್ತಿಸಿರುವಂತೆ ಬದಲಾವಣೆಯೇ ಜಗದ ನಿಯಮ. ಇಂದು ಬೆನ್ನು ತಟ್ಟಿದರೆ ಕೆಲವು ಬಾರಿ ಕೆನ್ನೆ ತಟ್ಟುವ ಸನ್ನಿವೇಶವೂ ಬರಬಹುದು. ಇಂತಹ ಅನುಭವಗಳೂ ನನಗೆ ಆಗಿದೆ. ಆಗ ಕೆನ್ನೆಯ ಮೇಲೆ ಮೂಡಿದ ನೋವನ್ನು ಮರೆಸುವುದು ಮತ್ತೆ ಇದೇ ಬ್ಲಾಗೇ!

    ಕೆಲವರು ನೌಕೆಯೊಳಗೇ ಮುಳುಗಿರಬಹುದು (ನನ್ನಂಥವರು), ಇನ್ನು ಕೆಲವರು ನೌಕೆಯಿಂದಾಚೆ ನೀರಿನಲ್ಲಿ ಮುಳುಗಿ ನೌಕೆಗೇನಾಗಿದೆ ಎಂದೂ ತಿಳಿಯದಿರಬಹುದು (ನೆಟ್‍ನಿಂದಾಚೆ ಇರುವವರು). ಆದಷ್ಟೂ ಕಾಲ ನೌಕೆಯೊಳಗೇ ಮುಳುಗಿರಲು ಆಶಿಸೋಣ.

    ಈ ಸರ್ವಾಂತರ್ಯಾಮಿ ನೆಟ್ ಎಂಬ ಬಲೆಯ ನಮ್ಮೆಲ್ಲರನ್ನೂ ಒಂದಾಗಿಸುತ್ತಿದೆ. ಇದನ್ನು ದೈವರೂಪ ಎನ್ನಬಹುದೇ?

    ಉತ್ತಮ ಚಿಂತನೆಯ ಸಮಯದಲ್ಲಿ ನಾನೆಂದೂ ಪಠಿಸುವ ಮಂತ್ರ.

    ಗುರುದೇವ ದಯಾ ಕರೊ ದೀನ ಜನೆ

  • Avi ,
    ವಿಚಿತ್ರಾನ್ನ ವಿಹರಿಸಿದ್ದಕ್ಕೆ ನಿಮಗೆ ವಂದನೆಗಳು .

    ನಿಮದು ಒಳ್ಳೆಯ ಲೇಖನ ...ಅಧ್ಬುತವಾಗಿದೆ

  • ಹೌದು ಶ್ರೀನಿವಾಸ್,
    ಈ ಮಾನವ ಸಂಬಂಧ ಎನ್ನುವುದು ಎಷ್ಟೊಂದು ವಿಚಿತ್ರವಲ್ಲವೆ,
    ಆತ್ಮೀಯರೇ ಪರಿಚಿತರಾಗುವಾಗ ಅಪರಿಚಿತರು ಆತ್ಮೀಯರಾಗುತ್ತಾ ಸಾಂತ್ವನ ನೀಡುತ್ತಾರೆ.
    ಒಂದು ನೋವು, ಇನ್ನೊಂದು ನಲಿವು.

  • ಬ್ಲಾಗ್ ಜಗತ್ತಿಗೆ ನಿಮಗೆ ಸ್ವಾಗತ ಪ್ರಕಾಶರೆ,
    ಆದ್ರೆ ವಿಚಿತ್ರಾನ್ನ ದಟ್ಸ್ ಕನ್ನಡದ್ದಲ್ವೆ?

  • ಎನಿಗ್ಮಾಟಿಕ್ಯಾಷ್ ಅವರೇ ಸ್ವಾಗತ ನಿಮಗೆ ನಮ್ಮ ಬ್ಲಾಗಿಗೆ.
    ಎನಿಗ್ಮಾಟಿಕ್ಯಾಷ್ ಅಂದರೇನು?

  • ಎನಿಗ್ಮಾ... ನಿಮಗೆ ಬ್ಲಾಗ್ ಇದೆಯೇ?

    ಓಓಓಓಓಓ ಗೊತ್ತಾಯ್ತು.... ಎನಿಗ್ಮಾಟಿಕಾಷ್ ಅಂದ್ರೇನೂಂತ....
    ಹೇಳಲಾ?

  • ಇಷ್ಟು ದಿನ ಇಲ್ಲಿ ಬರೋದು ಹೇಗೆ ಮಿಸ್ ಮಾಡ್ದೆ ಅಂತ ಆಶ್ಚರ್ಯ ಆಗ್ತಿದೆ ನನಗೇ! ಚೆನ್ನಾಗಿ ಬರೀತೀರಾ ರೀ:) ಈ ನೆಟ್ ಅನ್ನೋದು ಯಾವ್ ಯಾವ್ದೋ ಕೊಂಡಿಗಳನ್ನ ಬೆಸೆದುಬಿಡುತ್ತೆ! ಈ ಕಾಣದ ಕೈಗಳ ಜೊತೆಗಿನ ಸಂಬಂಧ ನಿಜಕ್ಕೂ ಹೃದಯಸ್ಪರ್ಶಿ...ಶ್ರೀನಿವಾಸ್ ಸಾರ್ ಹೇಳಿದ ಹಾಗೆ ನಮ್ಮೆಲ್ಲರ ಅನುಭವಕ್ಕೆ ಬರುತ್ತಿರೋ ವಿಷ್ಯ...ಚೆನ್ನಾಗಿ ಬರ್ದಿದೀರ

  • ಶ್ರೀ ಅವರೆ, ನಿಮಗೆ ಸ್ವಾಗತ. ಮತ್ತು ಥ್ಯಾಂಕ್ಸ್.

    ನೆಟ್ ಯಾವ್ಯಾವ್ದೋ ಕೊಂಡಿಗಳನ್ನು ಬೆಸೆಯುತ್ತದೆ ಹೌದು. ಆದರೆ ಒಂದೊಂದ್ಸಲ ನೆಟ್ ಕೈಕೊಟ್ಟಾಗ ಆ ಕೊಂಡಿ ಕೂಡ ಕಳಚಿಕೊಳ್ಳುತ್ತದೆ. ಅದನ್ನು ಮತ್ತೆ ಮತ್ತೆ ಬೆಸೆಯುತ್ತಿರಬೇಕಷ್ಟೆ. ಆ ಮಟ್ಟಿಗೆ ನಾವು ಬದ್ಧತೆ (commitment) ಪ್ರದರ್ಶಿಸಬೇಕಷ್ಟೆ.

Recent Posts

iPhone 16e: Best Features and Specs: ಹೊಸ ಐಫೋನ್ 16ಇ ಬಿಡುಗಡೆ

iPhone 16e joins the iPhone 16 lineup, featuring the fast performance of the A18 chip,…

3 weeks ago

ಚಳಿಯಲ್ಲಿ ಬಣ್ಣ ಬದಲಾಯಿಸುವ Realme 14 Pro ಸರಣಿ ಫೋನ್ ಬಿಡುಗಡೆ

ರಿಯಲ್‌ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ…

2 months ago

ಎಐ ವೈಶಿಷ್ಟ್ಯಗಳ realme GT 7 Pro ಬಿಡುಗಡೆ: ಬೆಲೆ ಎಷ್ಟು? ವೈಶಿಷ್ಟ್ಯಗಳೇನು? ಇಲ್ಲಿದೆ ಪೂರ್ಣ ಮಾಹಿತಿ

ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್‌ ಇರುವ ಬಹುನಿರೀಕ್ಷಿತ…

3 months ago

ರಿಯಲ್‌ಮಿ ನಾರ್ಜೋ 70 ಟರ್ಬೊ 5 ಜಿ, ರಿಯಲ್‌ಮಿ ಬಡ್ಸ್ ಎನ್‌1 ಬಿಡುಗಡೆ: ಬೆಲೆ, ವೈಶಿಷ್ಟ್ಯ ತಿಳಿಯಿರಿ

ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1…

6 months ago

ಓದುವಿಕೆ, ಕಲಿಕೆ ಉತ್ತೇಜನಕ್ಕೆ ‘ರೀಡ್-ಅ-ಥಾನ್’: ದಾಖಲೆಯ ಗುರಿ

ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.

6 months ago

Realme 13 +, Realme 13 5ಜಿ ಫೋನ್ ಬಿಡುಗಡೆ: ವೇಗದ ಫೋನ್‌ನ ವೈಶಿಷ್ಟ್ಯಗಳು, ಬೆಲೆ ಇಲ್ಲಿ ತಿಳಿಯಿರಿ

ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…

6 months ago