ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಕಾಲೇಜ್ ಲೈಫ್ ಈಸ್ ಗೋಲ್ಡನ್ ಲೈಫ್!
ನಿನ್ನೆ ಹೀಗೆಯೇ ಹಳೆಯ ಫೋಟೋ ಆಲ್ಬಂ ಒಂದನ್ನು ಮನೆಯಲ್ಲೇ ಕುಳಿತು ತಿರುವುತ್ತಿದ್ದೆ. ಕಾಲೇಜು ದಿನಗಳ ನಮ್ಮ ಕೀಟಲೆಗಳೆಲ್ಲಾ ಧುತ್ತನೆ ನೆನಪಾದವು. ಹಾಗಾಗಿ ಒಂದು ಹಿನ್ನೋಟ.... 1992ರಲ್ಲಿ ಪಿಯುಸಿ ಮುಗಿಸುವ ಹೊತ್ತಿಗೆ, ಮನೆಯ ಆರ್ಥಿಕ ಸ್ಥಿತಿಯಿಂದಾಗಿ...





