ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
Apple iPhone, iPad, Mac ಸಾಧನಗಳಲ್ಲಿ ಫೈಲ್ ವಿನಿಮಯಕ್ಕೆ ‘ಏರ್ಡ್ರಾಪ್’
ಆ್ಯಪಲ್ ಸಾಧನಗಳ ನಡುವೆ ವೈರ್ ಇಲ್ಲದೆಯೇ ಸುಲಭವಾಗಿ ಫೈಲ್ಗಳನ್ನು ವರ್ಗಾಯಿಸಲು ಅವುಗಳಲ್ಲಿರುವ ಏರ್ಡ್ರಾಪ್ ಎಂಬ ಆ್ಯಪ್ ನೆರವಾಗುತ್ತದೆ. ಇದು ಐಒಎಸ್ (ಆ್ಯಪಲ್ನ ಕಾರ್ಯಾಚರಣಾ ವ್ಯವಸ್ಥೆ) ಇರುವ ಸಾಧನಗಳಿಗಷ್ಟೇ ಲಭ್ಯ. ಇದು ಯಾವುದೇ ಪ್ರತ್ಯೇಕ ತಂತ್ರಾಂಶ ಅಳವಡಿಸದೆಯೇ, ಅತ್ಯಂತ ವೇಗವಾಗಿ ಫೈಲ್ ವರ್ಗಾಯಿಸಲು ಸಹಾಯ ಮಾಡುತ್ತದೆ.






