ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
ಮಂಜು ಹನಿಯ ‘ಮುತ್ತು’
ಗುಲಾಬಿಯ ಕೆನ್ನೆತುಂಬಾ ಮಂಜು ಹನಿಯ 'ಮುತ್ತಿ'ನ ಸ್ಪರ್ಷ!
ಇದು ನಮ್ಮೂರಿಗೆ ಇತ್ತೀಚೆಗೆ ಹೋಗಿದ್ದಾಗ ಮನೆಯಲ್ಲಿ ಅಮ್ಮ ನೆಟ್ಟು ಬೆಳೆಸಿದ ಗುಲಾಬಿ. ನನ್ನ ಕ್ಯಾಮರಾದಲ್ಲಿರುವ Super Macro option ಒಂದನ್ನು ಬಳಸಿ ತೆಗೆದಿದ್ದು. ತುಂಬಾ ಚೆನ್ನಾಗಿದೆ ಅಂತ ನನಗೆ ಅನ್ನಿಸಿದೆ....